22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!