23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya
error: Content is protected !!