25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ ವತಿಯಿಂದ ಚಂಡಿಕಾ ಹೋಮ ಜರಗಲಿರುವುದು. ಅ.1ರಂದು ರಂಗಪೂಜೆಯ ನಂತರ, ಕನ್ನಿಕಾ ಪೂಜೆ, ಬ್ರಾಹ್ಮಣ ಆರಾಧನೆ, ಸುವಾಸಿನಿ ಪೂಜೆ ಪ್ರಸಾದ ವಿತರಣೆ. ತದನಂತರ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಸೆ.26ರಂದು ರಾತ್ರಿ ಶ್ರೀ ದುರ್ಗಾ ಮೆಲೋಡಿಸ್ ನಾವೂರು ಇದರ ಕಲಾವಿದರಿಂದ ಭಕ್ತಿ ಸಂಗೀತ ರಸಮಂಜರಿ ಹಾಗೂ ಹಾಸ್ಯಮಯ ಕಾರ್ಯಕ್ರಮ ಜರುಗಲಿರುವುದು. ಸೆ.27ರಂದು ರಾತ್ರಿ ಪ್ರೀತಿ ವಿ.ಜೆ. ಕಿಲ್ಲೂರು ಹಾಗೂ ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.


ಅ.2ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆÀ್ಮ ಎಂಬ ಯಕ್ಷಗಾನ ಬಯಲಾಟ ಜರುಗಲಿದೆ.

ಶ್ರೀ ಕ್ಷೇತ್ರದಲ್ಲಿ ಊರವರ, ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರದ ನೀಲ ನಕ್ಷೆ

Related posts

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya
error: Content is protected !!