ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!