July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕೊಯ್ಯರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಸೆ.22 ರಿಂದ ಅ.2 ರವರೆಗೆ ನವರಾತ್ರಿ ಪೂಜಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.22ರಂದು ರಾತ್ರಿ 7-30 ರಿಂದ ಗಣಹೋಮ, ಕುಣಿತ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ , ಸೆ.23 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ, ಭಜನಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, ಸೆ.24 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ, ಗಮಕ ನೃತ್ಯರೂಪಕ, ಮಂಗಳಾರತಿ, ಪ್ರಸಾದ ವಿತರಣೆ . ಸೆ.25 ರಂದು ರಾತ್ರಿ 7-30 ನವರಾತ್ರಿ ಪೂಜೆ, ರಂಗಪೂಜೆ, ಸ್ಯಾಕ್ರೋಫೋನ್ ವಾದನ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.26 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ನಂತರ ಅವನೀಶ ಕೃಷ್ಣ ಕಾಂತಾಜೆ ಮತ್ತು ಶ್ರೀ ವಿಶ್ವೇಶ್ವರ ಭಟ್ ಉಂಡೆಮನೆ ಇವರಿಂದ ಶಂಕರ ಸ್ತೋತ್ರ ವಾಹಿನಿ ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ .

ಸೆ.27 ರಿಂದ ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಕೆ.ಆರ್ ಸುವರ್ಣ ಕುಮಾರಿ ಮತ್ತು ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಇವರಿಂದ ಹರಿಕಥಾ ಕಾಲಕ್ಷೇಪ ನಡೆಯಲಿದೆ. ರಾತ್ರಿ 9 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ. ಸೆ.29 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ಶ್ರೀ ರಂಗಪೂಜೆ ನಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ರಿಂದ ಮಂಗಳಾರತಿ, ಪ್ರಸಾದ ವಿತರಣೆ . ಸೆ.30 ರಂದು ರಾತ್ರಿ 7-30 ರಿಂದ ನವರಾತ್ರಿ ಪೂಜೆ, ರಂಗಪೂಜೆ ನಡೆಯಲಿದೆ. ನಂತರ ಭಕ್ತಿಗೀತೆ, ಭಜನಾ ಸ್ಪರ್ಧೆ ನಡೆಯಲಿದೆ. ರಾತ್ರಿ ಗಂಟೆ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ .

ಅ.1 ರಂದು ರಾತ್ರಿ ಗಂಟೆ 7-30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 9-00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸೆ.2 ರಂದು ಬೆಳಿಗ್ಗೆ 10 ರಿಂದ ವಿಜಯ ದಶಮಿ, ಚಿತ್ರ ಬಿಡಿಸುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಯಕ್ಷಗಾನ ತಾಳಮದ್ದಳೆ- ತ್ರಿಶಂಕು ಸ್ವರ್ಗ ನಡೆಯಲಿದೆ. ಮಧ್ಯಾಹ್ನ 12-30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಪ್ರತಿದಿನ ರಾತ್ರಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya
error: Content is protected !!