July 23, 2026
ಗ್ರಾಮಾಂತರ ಸುದ್ದಿ

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

ಬೆಳ್ತಂಗಡಿ: ಸೆ 20 ರಂದು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಕರ್ನಾಟಕ ಮುಸ್ಲಿಮ್ ಜಮಾತ್ ಗುರುವಾಯನಕೆರೆ ಸರ್ಕಲ್ ಮತ್ತು ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಸಂಯುಕ್ತ ಆಶ್ರಯದಲ್ಲಿ ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫ(ಸ ಅ) ರವರ 1500 ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮೀಲಾದ್ ಸೌಹಾರ್ಧ ಸಂಗಮ, ಗೌರವಾರ್ಪಣೆ,ಸ್ವಲಾತ್ ಮಜ್ಲಿಸ್, ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಹಾಫಿಳ್ ಮುಈನುದ್ದೀನ್ ರಝ್ವಿ ಅಲ್ ಅಮ್ಜದಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಅಬ್ದುಲ್ ಹಮೀದ್ ಅಲ್ – ಫುರ್ಖಾನಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಎಸ್.ಎಂ.ಕೋಯಾ ತಂಙಳ್ ದುವಾ ನೆರವೇರಿಸಿದರು.
ವಿವಿಧ ಕ್ಷೇತ್ರಗಳ ಗೋಪಿನಾಥ್ ನಾಯಕ್ ಚಂದ್ರಹಾಸ ಕೇದೆ, ಅಬ್ದುಲ್ ಕರೀಮ್ ಗೇರುಕಟ್ಟೆ ರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್, ಅಶ್ರಫ್ ಎ, ಇಬ್ರಾಹಿಂ ಕಕ್ಕಿಂಜೆ ಉಪಸ್ಥಿತರಿದ್ದರು.
ಎನ್ ಎಸ್ ಉಮ್ಮರ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕೊನೆಯಲ್ಲಿ ಅಬ್ಬೋನು ಮದ್ದಡ್ಕ ದನ್ಯವಾದವಿತ್ತರು.

Related posts

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
error: Content is protected !!