25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ತಿಮರೋಡಿ ಮಹೇಶ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.

ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು. ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ವಿಚಾರಣೆಗೆ ಸೆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟೀಸ್ ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

Related posts

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya
error: Content is protected !!