March 7, 2026
ಧಾರ್ಮಿಕ

ಧರ್ಮಸ್ಥಳ 27ನೇ ವಷ೯ದ ಭಜನಾ ಕಮ್ಮಟದ ಸಮಾರೋಪ : ಭಜನೆಯಿಂದ ಧಮ೯ ಸಂಸ್ಕೃತಿಯ ಅನಾವರಣ: ಒಡಿಯೂರು ಶ್ರೀ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ವತಿಯಿಂದ 27ನೇ ವಷ೯ದ ಭಜನಾ ಕಮ್ಮಟದ ಸಮಾರೋಪ ಸಮಾರಂಭ ಸೆ.21ರಂದು‌ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರುನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಭಜನೆ ಭಗವಂತನ ಸಾಕ್ಷಾತ್ಕಾರಕ್ಕೆ ಸುಲಭ ಮಾರ್ಗವಾಗಿದ್ದು, ಭಜನೆಯಿಂದ ಧಮ೯ ಸಂಸ್ಕೃತಿಯ ಅನಾವರಣವಾಗಿರುತ್ತದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಿದ್ದರು.

ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ, ಶ್ರೀಧಾಮ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದರು, ಲೋಕಸಭಾ ಕ್ಷೇತ್ರ, ಮಂಗಳೂರು, ಕೆ. ಪ್ರತಾಪಸಿಂಹ ನಾಯಕ್ ವಿಧಾನ ಪರಿಷತ್‌ ಸದಸ್ಯರು, ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಡಿ. ಹರ್ಷೇಂದ್ರ ಕುಮಾ‌ರ್ ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಡಿ.ಸುರೇಂದ್ರ ಕುಮಾರ್, ಶ್ರೀಮತಿ ಸುಪ್ರೀಯ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಮೈತ್ರಿ, ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳು ಹಾಗೂ ಮಹಿಳಾ ಶಿಬಿರಾರ್ಥಿಗಳಿಂದ ಭಜನೆ ಪ್ರಾತ್ಯಕ್ಷಿಕೆ ಮತ್ತು ಸಾಮೂಹಿಕ ಕುಣಿತ ಭಜನೆ ನಡೆಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ಶ್ಯಾನುಭಾಗ್, ರಾಮಕೃಷ್ಣ ಕಾಟುಕುಕ್ಕೆ, ಉಷಾ ಹೆಬ್ಬಾರ್, ಸೌಮ್ಯ ಸುಭಾಷ್,ಡಾ. ಐ.ಶಶಿಕಾಂತ್ ಜೈನ್, ಜಯರಾಂ ಭಟ್ ಕುಂದಾಪುರ, ಸಂದೇಶ, ನಾಗೇಶ್, ವಿನ್ಯಾಸ್, ವಿದುಷಿ ಚೈತ್ರ, ಡಾ. ಭಾಷಿಣಿ, ಡಾ.ಅನನ್ಯ ಇವರನ್ನು ಗೌರವಿಸಲಾಯಿತು. ರಾಜ್ಯ ಭಜನಾ ಪರಿಷತ್ ಪರವಾಗಿ ಖಾವಂದರಿಗೆ, ಮಾತೃಶ್ರೀ ಅಮ್ಮನವರಿಗೆ, ಭಜನಾ ಪರಿಷತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಗೌರವಿಸಿದರು.

ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಶ್ರೀ.ಧ.ಮಂ.ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಕುಮಾರ್ ಸ್ವಾಗತಿಸಿದರು. ಶ್ರೀ.ಧ.ಮಂ.ಭಜನಾ ಕಮ್ಮಟದ ಕಾಯ೯ದಶಿ೯ ವೀರೂ ಶೆಟ್ಟಿ ವರದಿ ವಾಚಿಸಿದರು. ಶಿಬಿರಾರ್ಥಿ ಗಳಾದ ಕೃಷ್ಣ ಪೂಜಾರಿ ಕುಂದಾಪುರ, ಭವಿಷ್ಯ ನೆಲ್ಯಾಡಿ ಅನಿಸಿಕೆ ವ್ಯಕ್ತಪಡಿಸಿದರು. ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಧನ್ಯವಾದವಿತ್ತರು. ಶ್ರೀ ನಿವಾಸ ರಾವ್ ಕಾಯ೯ಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya
error: Content is protected !!