July 23, 2026
ಗ್ರಾಮಾಂತರ ಸುದ್ದಿ

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

ಬೆಳ್ತಂಗಡಿ: ಸೆ 20 ರಂದು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಕರ್ನಾಟಕ ಮುಸ್ಲಿಮ್ ಜಮಾತ್ ಗುರುವಾಯನಕೆರೆ ಸರ್ಕಲ್ ಮತ್ತು ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಸಂಯುಕ್ತ ಆಶ್ರಯದಲ್ಲಿ ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫ(ಸ ಅ) ರವರ 1500 ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮೀಲಾದ್ ಸೌಹಾರ್ಧ ಸಂಗಮ, ಗೌರವಾರ್ಪಣೆ,ಸ್ವಲಾತ್ ಮಜ್ಲಿಸ್, ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಹಾಫಿಳ್ ಮುಈನುದ್ದೀನ್ ರಝ್ವಿ ಅಲ್ ಅಮ್ಜದಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಅಬ್ದುಲ್ ಹಮೀದ್ ಅಲ್ – ಫುರ್ಖಾನಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಎಸ್.ಎಂ.ಕೋಯಾ ತಂಙಳ್ ದುವಾ ನೆರವೇರಿಸಿದರು.
ವಿವಿಧ ಕ್ಷೇತ್ರಗಳ ಗೋಪಿನಾಥ್ ನಾಯಕ್ ಚಂದ್ರಹಾಸ ಕೇದೆ, ಅಬ್ದುಲ್ ಕರೀಮ್ ಗೇರುಕಟ್ಟೆ ರವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್, ಅಶ್ರಫ್ ಎ, ಇಬ್ರಾಹಿಂ ಕಕ್ಕಿಂಜೆ ಉಪಸ್ಥಿತರಿದ್ದರು.
ಎನ್ ಎಸ್ ಉಮ್ಮರ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕೊನೆಯಲ್ಲಿ ಅಬ್ಬೋನು ಮದ್ದಡ್ಕ ದನ್ಯವಾದವಿತ್ತರು.

Related posts

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
error: Content is protected !!