22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ತಿಮರೋಡಿ ಮಹೇಶ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.

ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು. ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ವಿಚಾರಣೆಗೆ ಸೆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟೀಸ್ ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

Related posts

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!