23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಬೆಳ್ತಂಗಡಿ :ಪಿ.ಎಂ.ಶ್ರೀ .ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ

.
ಬೆಳ್ತಂಗಡಿ :ತಾಲೂಕು ಕಾನೂನು ಸೇವೆಗಳ ಸಮಿತಿ ತಾಲೂಕು ವಕೀಲರುಗಳ ಸಂಘ ರಿಜಿಸ್ಟರ್ ಹಾಗೂ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇದರ ಸಂಯುಕ್ತಾಶ್ರಯದಲ್ಲಿ ಸೆ 19.ರಂದು ಪೋಕ್ಸೋ ಹಾಗೂ ವಿಶ್ವ ಪೋಷಕಾಂಶ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮನು ಬಿ.ಕೆ. ಅವರು ದೀಪಬೆಳಗುವ ಮೂಲಕ ಉದ್ಘಾಟಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರು ಶ್ರೀಮತಿ ಚೇತನಾಕ್ಷಿ ರವರು. ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪ್ರಧಾನಸಿವಿಲ್ ನ್ಯಾಯಾಧೀಶರಾದ ಗೌರವಾನ್ವೀತ ಶ್ರೀ ಸಂದೇಶ್ ಕೆ,ವಕೀಲರುಗಳ ಸಂಘದ ಕಾರ್ಯದರ್ಶಿ ಶ್ರೀ ನವೀನ್ ಬಿ.ಕೆ,ವಕೀಲರಾದ ಶ್ರೀಮತಿ ಮಮ್ತಾಜ್ ಬೇಗಂ,ಮುಖ್ಯಶಿಕ್ಷಕರಾದ ಶ್ರೀ ಸೂರ್ಯನಾರಾಯಣ ಪುತ್ತೂರಾಯ.ಪಿ. ಭಾಗವಹಿಸಿದ್ದರೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸ್ವರ್ಣಲತಾ,ಹಿರಿಯ ನ್ಯಾಯವಾದಿಗಳು ಇವರು** ಮಕ್ಕಳ ರಕ್ಷಣೆ,ಪೋಕ್ಸೋ ಹಾಗೂ ವಿಶ್ವ ಪೋಷಕಾಚರಣೆ ಬಗ್ಗೆ ಮಾಹಿತಿಯನ್ನು ನೀಡುವುದರ ಮೂಲಕ ತರಬೇತಿ ನೀಡಿದರು.ಸಭೆಯಲ್ಲಿ ಹಿರಿಯ ವಿಭಾಗದ ವಿದ್ಯಾರ್ಥಿಗಳು,ಮೇಲುಸ್ತುವಾರಿ ಸಮಿತಿ ಸದಸ್ಯರು,ಪೋಷಕರು,ಶಿಕ್ಷಕವೃಂದದವರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಜನನ ಪ್ರಮಾಣಪತ್ರಇಲ್ಲದೆ ದಾಖಲಾದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮೂಲಕ ಮಾಡಿಸಿದ ಜನನ ಪ್ರಮಾಣಪತ್ರವನ್ನು ವಿತರಿಸಲಾಯಿತು.ಹಿರಿಯ ಶಿಕ್ಷಕಶ್ರೀ ದಿನಕರ ನಾಯಕ್ ಸ್ವಾಗತಿಸಿದರೆ,ಹಿರಿಯಶಿಕ್ಷಕಿ ಶ್ರೀಮತಿ ವಿದ್ಯಾಶೆಣೈ ಧನ್ಯವಾದಸಲ್ಲಿಸಿದರು.ಶಿಕ್ಷಕಿ ಚಿತ್ರಾ ಜಿ.ಕೆ.ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
error: Content is protected !!