July 23, 2026
ಧಾರ್ಮಿಕ

ಧರ್ಮಸ್ಥಳ 27ನೇ ವಷ೯ದ ಭಜನಾ ಕಮ್ಮಟದ ಸಮಾರೋಪ : ಭಜನೆಯಿಂದ ಧಮ೯ ಸಂಸ್ಕೃತಿಯ ಅನಾವರಣ: ಒಡಿಯೂರು ಶ್ರೀ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ವತಿಯಿಂದ 27ನೇ ವಷ೯ದ ಭಜನಾ ಕಮ್ಮಟದ ಸಮಾರೋಪ ಸಮಾರಂಭ ಸೆ.21ರಂದು‌ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರುನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಭಜನೆ ಭಗವಂತನ ಸಾಕ್ಷಾತ್ಕಾರಕ್ಕೆ ಸುಲಭ ಮಾರ್ಗವಾಗಿದ್ದು, ಭಜನೆಯಿಂದ ಧಮ೯ ಸಂಸ್ಕೃತಿಯ ಅನಾವರಣವಾಗಿರುತ್ತದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಿದ್ದರು.

ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ, ಶ್ರೀಧಾಮ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದರು, ಲೋಕಸಭಾ ಕ್ಷೇತ್ರ, ಮಂಗಳೂರು, ಕೆ. ಪ್ರತಾಪಸಿಂಹ ನಾಯಕ್ ವಿಧಾನ ಪರಿಷತ್‌ ಸದಸ್ಯರು, ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಡಿ. ಹರ್ಷೇಂದ್ರ ಕುಮಾ‌ರ್ ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಡಿ.ಸುರೇಂದ್ರ ಕುಮಾರ್, ಶ್ರೀಮತಿ ಸುಪ್ರೀಯ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಮೈತ್ರಿ, ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳು ಹಾಗೂ ಮಹಿಳಾ ಶಿಬಿರಾರ್ಥಿಗಳಿಂದ ಭಜನೆ ಪ್ರಾತ್ಯಕ್ಷಿಕೆ ಮತ್ತು ಸಾಮೂಹಿಕ ಕುಣಿತ ಭಜನೆ ನಡೆಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ಶ್ಯಾನುಭಾಗ್, ರಾಮಕೃಷ್ಣ ಕಾಟುಕುಕ್ಕೆ, ಉಷಾ ಹೆಬ್ಬಾರ್, ಸೌಮ್ಯ ಸುಭಾಷ್,ಡಾ. ಐ.ಶಶಿಕಾಂತ್ ಜೈನ್, ಜಯರಾಂ ಭಟ್ ಕುಂದಾಪುರ, ಸಂದೇಶ, ನಾಗೇಶ್, ವಿನ್ಯಾಸ್, ವಿದುಷಿ ಚೈತ್ರ, ಡಾ. ಭಾಷಿಣಿ, ಡಾ.ಅನನ್ಯ ಇವರನ್ನು ಗೌರವಿಸಲಾಯಿತು. ರಾಜ್ಯ ಭಜನಾ ಪರಿಷತ್ ಪರವಾಗಿ ಖಾವಂದರಿಗೆ, ಮಾತೃಶ್ರೀ ಅಮ್ಮನವರಿಗೆ, ಭಜನಾ ಪರಿಷತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಗೌರವಿಸಿದರು.

ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಶ್ರೀ.ಧ.ಮಂ.ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಕುಮಾರ್ ಸ್ವಾಗತಿಸಿದರು. ಶ್ರೀ.ಧ.ಮಂ.ಭಜನಾ ಕಮ್ಮಟದ ಕಾಯ೯ದಶಿ೯ ವೀರೂ ಶೆಟ್ಟಿ ವರದಿ ವಾಚಿಸಿದರು. ಶಿಬಿರಾರ್ಥಿ ಗಳಾದ ಕೃಷ್ಣ ಪೂಜಾರಿ ಕುಂದಾಪುರ, ಭವಿಷ್ಯ ನೆಲ್ಯಾಡಿ ಅನಿಸಿಕೆ ವ್ಯಕ್ತಪಡಿಸಿದರು. ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಧನ್ಯವಾದವಿತ್ತರು. ಶ್ರೀ ನಿವಾಸ ರಾವ್ ಕಾಯ೯ಕ್ರಮ ನಿರೂಪಿಸಿದರು.

Related posts

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya

ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ‌ಆನ್ಲೈನ್ ನಲ್ಲಿ ವಿಚಾರಸಂಕಿರಣ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya
error: Content is protected !!