38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಉಜಿರೆ: ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ. ಯಿಂದ ಪಿ.ಜಿ ವರೆಗಿನ ೫೬ ಶಿಕ್ಷಣ ಸಂಸ್ಥೆಗಳ ಸುಮಾರು ೧೦,೦೦೦ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ಎಂ. ಮೋಹನ ಆಳ್ವ ಮಾತನಾಡಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತನ್ನ ಸಾರ್ಥಕ ಬದುಕಿನ ಪ್ರೇರಕರು, ಮಾರ್ಗದರ್ಶಕರು ಹಾಗೂ ಗುರುಗಳಾಗಿದ್ದು ತಾನು ಅವರ ಅಭಿಮಾನಿ ಶಿಷ್ಯ ಎಂದು ಹೇಳಿದರು. ಹೆಗ್ಗಡೆಯವರ ದಕ್ಷ ನಾಯಕತ್ವ, ತಾಳ್ಮೆ, ವಿವೇಕ, ಸಂಯಮ ಹಾಗೂ ಸ್ಥಿತಪ್ರಜ್ಞ ಗುಣವನ್ನು ಶ್ಲಾಘಿಸಿದ ಆಳ್ವರು ಅವರು ಕಲಿಯುಗ ಕಲ್ಪವೃಕ್ಷ, ಕಾಮಧೇನು ಎಂದು ಬಣ್ಣಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಜನೂ, ಋಷಿಯೂ ಆಗಿರುವ ಹೆಗ್ಗಡೆಯವರು ನಿಜವಾದ ಅರ್ಥದಲ್ಲಿ “ರಾಜರ್ಷಿ” ಎಂದು ಶ್ಲಾಘಿಸಿದರು.

ಪಾರಂಪರಿಕ ಚಿಕಿತ್ಸಾ ಪದ್ಧತಿಗಳಾದ ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗಾಭ್ಯಾಸಗಳಿಗೆ ಹೆಗ್ಗಡೆಯವರ ಸೇವೆ ಮತ್ತು ಕೊಡುಗೆಯನ್ನು ಧನ್ಯತೆಯಿಂದ ಸ್ಮರಿಸಿದರು. ಉಡುಪಿಯಲ್ಲಿರುವ ಎಸ್.ಡಿ.ಎಮ್. ಆಯುರ್ವೇದ ಕಾಲೇಜು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದರು. ಹಾಸನ ಮತ್ತು ಬೆಂಗಳೂರಿನಲ್ಲಿರುವ ಎಸ್.ಡಿ.ಎಮ್. ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿವೆ. ಉಜಿರೆ ಮತ್ತು ಧರ್ಮಸ್ಥಳದಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕೂಡಾ ಉತ್ತಮ ಸೇವೆಯಲ್ಲಿ ಚಿರಪರಿಚಿತವಾಗಿವೆ ಎಂದರು. ಹೆಗ್ಗಡೆಯವರು ಹಾಗೂ ಧರ್ಮಸ್ಥಳದ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರ ಮತ್ತು ವದಂತಿಗಳನ್ನು ಖಂಡಿಸಿದ ಅವರು ಹೆಗ್ಗಡೆಯವರ ಜೊತೆ ಹಿರಿಯ ವಿದ್ಯಾರ್ಥಿಗಳೆಲ್ಲರೂ “ಧರ್ಮ ಸಿಪಾಯಿ” ಗಳಾಗಿ ಧರ್ಮಸ್ಥಳದ ಪಾವಿತ್ರö್ಯ ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿರುತ್ತೇವೆ ಎಂದು ಭರವಸೆ ನೀಡಿದರು.

ಪೂನಾದ ಕಾನೂನು ಕಾಲೇಜಿನ ಡೀನ್ ಹಾಗೂ ಮಂಗಳೂರಿನ ಎಸ್.ಡಿ.ಎಮ್. ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಮಾಜಿ ಉಪನ್ಯಾಸಕಿ ಪ್ರೊ. ಶಶಿಕಲಾ ಗುರುಪುರ ಮಾತನಾಡಿ, ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ. ಹೆಗ್ಗಡೆಯವರು ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಕಾಯಕ, ದುರ್ಬಲ ವರ್ಗದವರ ಸಬಲೀಕರಣ, ಮಹಿಳಾ ಸಬಲೀಕರಣ, ಸಮರ್ಪಣಾ ಮನೋಭಾವ, ತ್ಯಾಗ, ನಿಷ್ಠೆ, ಏಕಾಗ್ರತೆ ಮತ್ತು ಬದ್ಧತೆಯನ್ನು ಶ್ಲಾಘಿಸಿದ ಅವರು, ಹೆಗ್ಗಡೆಯವರು ಒಬ್ಬ “ದೇವಮಾನವ” ಎಂದು ಶ್ಲಾಘಿಸಿದರು.ಧಾರವಾಡದ ಎಸ್.ಡಿ.ಎಮ್. ವೈದ್ಯಕೀಂiÀi ಕಾಲೇಜಿನ ಡಾ. ಅನಿಲ್ ಮಾತನಾಡಿ ಧಾರವಾಡದಲ್ಲಿ ಹೆಗ್ಗಡೆಯವರ ನೇತೃತ್ವದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಸೇವೆ-ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಎಲ್ಲರೂ ಧರ್ಮಸ್ಥಳದ ರಾಯಭಾರಿಗಳಾಗಿದ್ದು ಹೆಗ್ಗಡೆಯವರ ಸೇವಾ ಕಾರ್ಯಗಳಿಗೆ ತೊಂದರೆಯಾಗದAತೆ ನಿರಂತರ ಬೆಂಬಲ ನೀಡುವುದಲ್ಲದೆ ಹೆಗ್ಗಡೆಯವರ ಜೊತೆ ಸದಾ ಧರ್ಮಸ್ಥಳದ ಪಾವಿತ್ರö್ಯ ರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಭರವಸೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ದೇವರ ಅನುಗ್ರಹದೊಂದಿಗೆ, ಎಲ್ಲರ ಪ್ರೀತಿ-ವಿಶ್ವಾಸ, ಗೌರವ ಹಾಗೂ ಅಭಿಮಾನವೇ ತಮಗೆ ಶ್ರೀರಕ್ಷೆಯಾಗಿದೆ. ತನ್ನ ಸೇವಾಕಾರ್ಯಗಳನ್ನು ಮುಂದುವರಿಸಲು ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದರು. ಎಲ್ಲಾ ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳಲ್ಲಿ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ. ಮಾನವೀಯ ಮೌಲ್ಯಗಳ ಉದ್ದೀಪನದೊಂದಿಗೆ ಸಮಾಜದ ಸಭ್ಯ ಸುಸಂಸ್ಕೃತ ನಾಗರಿಕರನ್ನು ರೂಪಿಸಲಾಗುತ್ತದೆ. ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಎಸ್.ಡಿ.ಎಮ್. ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಧನ್ಯವಾದವಿತ್ತರು. ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಿ.ಇ.ಒ. ಬಿ.ಪಿ. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
error: Content is protected !!