July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!