25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ಮೂಲಕ, ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ನೀಡುವ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಘಟಕದ ಅಧ್ಯಕ್ಷೆ ಜೇಸಿ ಎಚ್‌ಜಿಎಫ್ ಡಾ. ಶೋಭಾ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಡಿಯಲ್ಲಿ, 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ದಿವ್ಯಶ್ರೀ ಜೇಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆಯಡಿ ಆಯ್ಕೆಯಾಗಿದ್ದು, ತಿಂಗಳಿಗೆ ರೂ. 1000/- ದಂತೆ 10 ತಿಂಗಳು, ಈಂತೆ 3 ವರ್ಷಗಳ ಕಾಲ ಒಟ್ಟು ರೂ. 30,000/- ವಿದ್ಯಾರ್ಥಿವೇತನ ಪಡೆಯಲಿದ್ದಾರೆ.


ಮತ್ತು 10ನೇ ತರಗತಿಯ ಮತ್ತಿಬ್ಬರು ವಿದ್ಯಾರ್ಥಿನಿಯರಾದ ಕುಮಾರಿ ಕುಶಣ್ಯಾ ಹಾಗೂ ಕುಮಾರಿ ಸವಿತಾ ಅವರು ತಲಾ ರೂ. 3000/- ರ ಒಂದು ಬಾರಿ ವಿದ್ಯಾರ್ಥಿವೇತನಕ್ಕಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರೀನಾ ಎಸ್, ಎಲ್ಲಾ ಜೇಸಿಐ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದರು.

Related posts

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya
error: Content is protected !!