September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ಮೂಲಕ, ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ನೀಡುವ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಘಟಕದ ಅಧ್ಯಕ್ಷೆ ಜೇಸಿ ಎಚ್‌ಜಿಎಫ್ ಡಾ. ಶೋಭಾ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಡಿಯಲ್ಲಿ, 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ದಿವ್ಯಶ್ರೀ ಜೇಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆಯಡಿ ಆಯ್ಕೆಯಾಗಿದ್ದು, ತಿಂಗಳಿಗೆ ರೂ. 1000/- ದಂತೆ 10 ತಿಂಗಳು, ಈಂತೆ 3 ವರ್ಷಗಳ ಕಾಲ ಒಟ್ಟು ರೂ. 30,000/- ವಿದ್ಯಾರ್ಥಿವೇತನ ಪಡೆಯಲಿದ್ದಾರೆ.


ಮತ್ತು 10ನೇ ತರಗತಿಯ ಮತ್ತಿಬ್ಬರು ವಿದ್ಯಾರ್ಥಿನಿಯರಾದ ಕುಮಾರಿ ಕುಶಣ್ಯಾ ಹಾಗೂ ಕುಮಾರಿ ಸವಿತಾ ಅವರು ತಲಾ ರೂ. 3000/- ರ ಒಂದು ಬಾರಿ ವಿದ್ಯಾರ್ಥಿವೇತನಕ್ಕಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರೀನಾ ಎಸ್, ಎಲ್ಲಾ ಜೇಸಿಐ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದರು.

Related posts

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!