25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಸೆ. 22ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ರವರು ಭಾಗವಹಿಸಿದರು.

ಸ್ವಾಗತಿಸಿದ ನಂತರ ಪಿಡಿಒ ದೀಪಕ್ ರಾಜ್ ವರದಿಗೆ ಮುಂದಾದಾಗ ಗ್ರಾಮಸ್ಥರರಾದ ಲಕ್ಷ್ಮೀ ನಾರಾಯಣರವರು ಅಧಿಕಾರಿಗಳು ಸಭೆಗೆ ಹಾಜರಾಗದ ಬಗ್ಗೆ ಮಾತನಾಡಿ ಗ್ರಾಮಸಭೆಯಲ್ಲಿ ಅಧಿಕಾರಿಗಳು ಕಡಿಮೆ ಇರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು.

ಮಾರ್ಗದರ್ಶಿ ಅಧಿಕಾರಿ ಈ ವೇಳೆ ಮಾತನಾಡಿ ಗ್ರಾಮ ಮಟ್ಟದ ಅಧಿಕಾರಿಗಳು ಇದ್ದು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ಇರುವ ಕೆಲವು ಸಮಸ್ಯೆಗಳ ಬಗ್ಗೆ ತಿಳಿಸಿದರಾದರೂ ಹಾಗೂ ಕೆಲವು ಅಧಿಕಾರಿಗಳು ಬರುತ್ತಿದ್ದಾರೆ ಎಂದು ಹೇಳಿದರೂ ಕೇಳದ ಕೆಲ ಗ್ರಾಮಸ್ಥರು ಅಧಿಕಾರಿಗಳು ಬಂದ ಮೇಲೆಯೇ ಪ್ರಾರಂಭಿಸುವ ಎಂದರು. 12 ಗಂಟೆಯಾದರೂ ಅಧಿಕಾರಿಗಳು ಬರುವುದು ಕಾಣದಾದಾಗ ಕೆಲ ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಉತ್ತರಿಸಲು ಅಧಿಕಾರಿಗಳು ಇಲ್ಲದಿರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು. ಕೆಲವರು ಬೇಕು-ಕೆಲವರು ಬೇಡ ಎಂಬ ಚರ್ಚೆ ನಡೆದು ಕೊನೆಗೆ ಪಿಡಿಒ ಗ್ರಾಮಸಭೆ ಮುಂದೂಡುವ ಬಗ್ಗೆ ಹೇಳಿದರು.

ಈ ವೇಳೆ ರಿಕ್ಷಾ ತಂಗುದಾಣದ ಕುರಿತು ರಿಕ್ಷಾ ಚಾಲಕ ಮಾಲಕರು ಪಿಡಿಒ ದೀಪಕ್ ರಾಜ್ ರಲ್ಲಿ ವಿಚಾರಿಸಿದಾಗ ಮಾತಿನ ಚಕಮಕಿ ನಡೆದು ಪಿಡಿಒ ಹೊರಟರು. ಮಾರ್ಗದರ್ಶಿ ಅಧಿಕಾರಿ ತಾಲೂಕು ಮುಖ್ಯಕಾರ್ಯನಿರ್ವಹಣಾಧಿಕಾರಿಯವರನ್ನು ಸಂಪರ್ಕಿಸಿದ ನಂತರ ಪಿಡಿಒ ಆಗಮಿಸಿದರಾದರೂ ಗ್ರಾಮಸಭೆ ನಡೆಸಲು ಗ್ರಾಮಸ್ಥರ ಕೋರಂ ಇಲ್ಲದ ಕಾರಣ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆ ಮುಂದೂಡಿದರು.

ವೇದಿಕೆಯಲ್ಲಿ ನಿಯೋಜಿತ ಪಿಡಿಒ, ಉಪಾಧ್ಯಕ್ಷ ಪ್ರಭಾಕರ್, ಪಂ. ಸದಸ್ಯರು, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya
error: Content is protected !!