25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಸೆ. 22ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ರವರು ಭಾಗವಹಿಸಿದರು.

ಸ್ವಾಗತಿಸಿದ ನಂತರ ಪಿಡಿಒ ದೀಪಕ್ ರಾಜ್ ವರದಿಗೆ ಮುಂದಾದಾಗ ಗ್ರಾಮಸ್ಥರರಾದ ಲಕ್ಷ್ಮೀ ನಾರಾಯಣರವರು ಅಧಿಕಾರಿಗಳು ಸಭೆಗೆ ಹಾಜರಾಗದ ಬಗ್ಗೆ ಮಾತನಾಡಿ ಗ್ರಾಮಸಭೆಯಲ್ಲಿ ಅಧಿಕಾರಿಗಳು ಕಡಿಮೆ ಇರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು.

ಮಾರ್ಗದರ್ಶಿ ಅಧಿಕಾರಿ ಈ ವೇಳೆ ಮಾತನಾಡಿ ಗ್ರಾಮ ಮಟ್ಟದ ಅಧಿಕಾರಿಗಳು ಇದ್ದು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ಇರುವ ಕೆಲವು ಸಮಸ್ಯೆಗಳ ಬಗ್ಗೆ ತಿಳಿಸಿದರಾದರೂ ಹಾಗೂ ಕೆಲವು ಅಧಿಕಾರಿಗಳು ಬರುತ್ತಿದ್ದಾರೆ ಎಂದು ಹೇಳಿದರೂ ಕೇಳದ ಕೆಲ ಗ್ರಾಮಸ್ಥರು ಅಧಿಕಾರಿಗಳು ಬಂದ ಮೇಲೆಯೇ ಪ್ರಾರಂಭಿಸುವ ಎಂದರು. 12 ಗಂಟೆಯಾದರೂ ಅಧಿಕಾರಿಗಳು ಬರುವುದು ಕಾಣದಾದಾಗ ಕೆಲ ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಉತ್ತರಿಸಲು ಅಧಿಕಾರಿಗಳು ಇಲ್ಲದಿರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು. ಕೆಲವರು ಬೇಕು-ಕೆಲವರು ಬೇಡ ಎಂಬ ಚರ್ಚೆ ನಡೆದು ಕೊನೆಗೆ ಪಿಡಿಒ ಗ್ರಾಮಸಭೆ ಮುಂದೂಡುವ ಬಗ್ಗೆ ಹೇಳಿದರು.

ಈ ವೇಳೆ ರಿಕ್ಷಾ ತಂಗುದಾಣದ ಕುರಿತು ರಿಕ್ಷಾ ಚಾಲಕ ಮಾಲಕರು ಪಿಡಿಒ ದೀಪಕ್ ರಾಜ್ ರಲ್ಲಿ ವಿಚಾರಿಸಿದಾಗ ಮಾತಿನ ಚಕಮಕಿ ನಡೆದು ಪಿಡಿಒ ಹೊರಟರು. ಮಾರ್ಗದರ್ಶಿ ಅಧಿಕಾರಿ ತಾಲೂಕು ಮುಖ್ಯಕಾರ್ಯನಿರ್ವಹಣಾಧಿಕಾರಿಯವರನ್ನು ಸಂಪರ್ಕಿಸಿದ ನಂತರ ಪಿಡಿಒ ಆಗಮಿಸಿದರಾದರೂ ಗ್ರಾಮಸಭೆ ನಡೆಸಲು ಗ್ರಾಮಸ್ಥರ ಕೋರಂ ಇಲ್ಲದ ಕಾರಣ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆ ಮುಂದೂಡಿದರು.

ವೇದಿಕೆಯಲ್ಲಿ ನಿಯೋಜಿತ ಪಿಡಿಒ, ಉಪಾಧ್ಯಕ್ಷ ಪ್ರಭಾಕರ್, ಪಂ. ಸದಸ್ಯರು, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
error: Content is protected !!