23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ ಜಿಲ್ಲಾ ಗೌರವಾಧ್ಯಕ್ಷ ಡಾ.ಗೋಪಾಲಕೃಷ್ಣ ಕಾಂಚೋಡು, ದ.ಕ ಜಿಲ್ಲಾಧ್ಯಕ್ಷ ನೊರ್ಬಟ್ ರೊಡ್ರಿಗಸ್ ಇವರುಗಳ ನೇತೃತ್ವದಲ್ಲಿ ಸೆ.19ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಪಾಧ್ಯಕ್ಷ ರುಡಾಲ್ಫ್ ಡಿ’ಸೋಜ, ಖಜಾಂಜಿ ಚಂದಪ್ಪ ಡಿ. ಎಸ್, ಕಡಬ ತಾಲೂಕು ಅಧ್ಯಕ್ಷ ಸೆಬಾಸ್ಟಿಯಾನ್, ಕಡಬದ ನಿಕಟಪೂರ್ವ ಅಧ್ಯಕ್ಷ ಸೈಮನ್ ಟಿ.ಜಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಮ್. ಜೆ ಮಣಿ, ಅಧ್ಯಕ್ಷರಾಗಿ ಎನ್.ಪಿ ತಂಗಚ್ಚನ್, ಉಪಾಧ್ಯಕ್ಷ ರವಿ ಪ್ರಸಾದ್, ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್ ಗೌಡ, ಜತೆ ಕಾರ್ಯದರ್ಶಿಯಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿ ಎನ್. ಸುರೇಶ್, ಖಜಾಂಜಿ ವಾಲ್ಟರ್ ಸಿಕ್ವೇರಾ, ಜತೆ ಖಜಾಂಜಿ ಪ್ರಾನ್ಸಿಸ್, ಪ್ರಧಾನ ಸಲಹೆಗಾರರಾಗಿ ಎ.ಕೆ ಶಿವನ್, ಮೋಹನ ಶೆಟ್ಟಿ ಮುದ್ದಿಗೆ, ಶಿವರಾಮ ಭಟ್, ಎಮ್.ಬಿ ಪಿಂಟೋ, ಹರೀಶ್ ರೈ, ಕಾಂತಪ್ಪ ಗೌಡ, ವೆಂಕಟರಮಣ ಶರ್ಮ, ಕೃಷ್ಣಾನಂದ ಶೆಟ್ಟಿ , ಚೇರಿಯನ್ ಟಿ ಉಜಿರೆ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!