September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

ಬೆಳ್ತಂಗಡಿ: ನಮ್ಮ ಋಷಿ ಮುನಿಗಳು ಗೊತ್ರಗಳನ್ನು ನಿರ್ಧರಿಸಿದ್ದಾರೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಪ್ರತೀ ವ್ಯಕ್ತಿಯೂ ನಮ್ಮ ಋಷಿ ಮುನಿಗಳು ರೂಪಿಸಿದ ದಾರಿಯಲ್ಲಿ ಮುಂದುವರಿಯಬೇಕು. ಇದರಿಂದ ಜೀವನದಲ್ಲಿ ಸಂಸ್ಕಾರ ಆನಂದ ದೊರೆಯುತ್ತದೆ. ಮತ್ತು ಹಿರಿಯರ ನೆನಪುನೊಂದಿಗೆ ಕುಟುಂಬ ಪದ್ದತಿಯು ಬೆಳೆಯುತ್ತದೆ. ಪರಂಪರೆ ಸಂಸ್ಕ್ರತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಹಿರಿಯರು ನೀಡಿದ ಸಂಸ್ಕಾರವನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಹಿರಿಯ ವಿದ್ವಾಂಸ ಶ್ರೀನಿಧಿ ಅಮ್ಮಣ್ನಾಯ ಕೊಕ್ಕಡ ನುಡಿದರು.


ಅಡ್ಕಾಡಿ ಶ್ರೀಕರ ರಾವ್ ಅವರ ಮನೆಯಲ್ಲಿ ನಡೆದ ವಲಯ ಶಿವಳ್ಳಿ ಸಮಾಜದ ಸಭೆಯಲ್ಲಿ ಅವರು ಉಪನ್ಯಾಸ ನೀಡಿ ಮಾರ್ಗದರ್ಶನ ನೀಡಿದ್ದರು.


ಈ ಸಂದರ್ಭದಲ್ಲಿ ಅವರಿಗೆ ಸಮಾಜದ ವತಿಯಿಂದ ಅಭಿನಂದನೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಪುರಂದರ ರಾವ್ ವಹಿಸಿದ್ದರು.
ತಾಲೂಕು ಪ್ರತಿನಿಧಿ ಅಡ್ಕಾಡಿ ಸುಧೀರ ರಾವ್ ಸ್ವಾಗತಿಸಿದ್ದರು. ಸಭೆಯಲ್ಲಿ ಮಹಿಳಾ ಸಮಿತಿಯ ಪಧಾಧಿಕಾರಿಗಳು , ವಿವಿಧ ವಿಭಾಗದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya
error: Content is protected !!