September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

ಕಳೆಂಜ : ನಂದಗೋಕುಲ ಗೋಶಾಲೆ ಕಳೆಂಜ ಇದರ ವತಿಯಿಂದ ಕಿರಣ್‌ಚಂದ್ರ ಡಿ. ಪುಷ್ಪಗಿರಿ ಧಾರ್ಮಿಕ ಮುಖಂಡರು ಉರುವಾಲು ಇವರ ನಿವಾಸಕ್ಕೆ ಭೇಟಿ ನೀಡಿದರು. ಗೋಶಾಲೆಯ ಕಾರ್ಯ ಚಟುವಟಿಕೆಗಳು, ನಿರ್ವಹಣೆ, ಮೂಲ ಸೌಕರ್ಯ, ಸಂಪನ್ಮೂಲ ಕ್ರೂಡೀಕರಣ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಧಾರ್ಮಿಕ, ಸಾಮಾಜಿಕ ನೇತಾರ ಕಿರಣ್‌ಚಂದ್ರ ಡಿ. ರವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಡಾ|| ಎಮ್ ಎಮ್ ದಯಾಕರ್ ಮತ್ತು ಉಪಾಧ್ಯಕ್ಷ ನಾರಾಯಣ ಗೌಡ, ಗೋಶಾಲೆ ನಿರ್ವಹಣಾ ಸಮಿತಿ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿಗಾರ್, ವಿಶ್ವ ಹಿಂದು ಪರಿಷತ್ ತಾಲೂಕು ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಗೌಡ ಉಂಕ್ರೊಟ್ಟು, ಭಾರತೀಯ ಮಸ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್‌ನಾಥ್, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪ ಆರ್. ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಶೋಭ ವಿ ಶೆಟ್ಟಿ, ಸಂತೋಷ್ ನೇಕಾರ ಪೇಟೆ, ಕಛೇರಿ ಸಿಬ್ಬಂದಿಗಳಾದ ಗೋಪಾಲ, ಕವಿತಾ, ದೀಪಿಕಾ, ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!