24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಸೆ. 22ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ರವರು ಭಾಗವಹಿಸಿದರು.

ಸ್ವಾಗತಿಸಿದ ನಂತರ ಪಿಡಿಒ ದೀಪಕ್ ರಾಜ್ ವರದಿಗೆ ಮುಂದಾದಾಗ ಗ್ರಾಮಸ್ಥರರಾದ ಲಕ್ಷ್ಮೀ ನಾರಾಯಣರವರು ಅಧಿಕಾರಿಗಳು ಸಭೆಗೆ ಹಾಜರಾಗದ ಬಗ್ಗೆ ಮಾತನಾಡಿ ಗ್ರಾಮಸಭೆಯಲ್ಲಿ ಅಧಿಕಾರಿಗಳು ಕಡಿಮೆ ಇರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು.

ಮಾರ್ಗದರ್ಶಿ ಅಧಿಕಾರಿ ಈ ವೇಳೆ ಮಾತನಾಡಿ ಗ್ರಾಮ ಮಟ್ಟದ ಅಧಿಕಾರಿಗಳು ಇದ್ದು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ಇರುವ ಕೆಲವು ಸಮಸ್ಯೆಗಳ ಬಗ್ಗೆ ತಿಳಿಸಿದರಾದರೂ ಹಾಗೂ ಕೆಲವು ಅಧಿಕಾರಿಗಳು ಬರುತ್ತಿದ್ದಾರೆ ಎಂದು ಹೇಳಿದರೂ ಕೇಳದ ಕೆಲ ಗ್ರಾಮಸ್ಥರು ಅಧಿಕಾರಿಗಳು ಬಂದ ಮೇಲೆಯೇ ಪ್ರಾರಂಭಿಸುವ ಎಂದರು. 12 ಗಂಟೆಯಾದರೂ ಅಧಿಕಾರಿಗಳು ಬರುವುದು ಕಾಣದಾದಾಗ ಕೆಲ ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಉತ್ತರಿಸಲು ಅಧಿಕಾರಿಗಳು ಇಲ್ಲದಿರುವುದರಿಂದ ಗ್ರಾಮಸಭೆ ಮುಂದೂಡಿ ಎಂದರು. ಕೆಲವರು ಬೇಕು-ಕೆಲವರು ಬೇಡ ಎಂಬ ಚರ್ಚೆ ನಡೆದು ಕೊನೆಗೆ ಪಿಡಿಒ ಗ್ರಾಮಸಭೆ ಮುಂದೂಡುವ ಬಗ್ಗೆ ಹೇಳಿದರು.

ಈ ವೇಳೆ ರಿಕ್ಷಾ ತಂಗುದಾಣದ ಕುರಿತು ರಿಕ್ಷಾ ಚಾಲಕ ಮಾಲಕರು ಪಿಡಿಒ ದೀಪಕ್ ರಾಜ್ ರಲ್ಲಿ ವಿಚಾರಿಸಿದಾಗ ಮಾತಿನ ಚಕಮಕಿ ನಡೆದು ಪಿಡಿಒ ಹೊರಟರು. ಮಾರ್ಗದರ್ಶಿ ಅಧಿಕಾರಿ ತಾಲೂಕು ಮುಖ್ಯಕಾರ್ಯನಿರ್ವಹಣಾಧಿಕಾರಿಯವರನ್ನು ಸಂಪರ್ಕಿಸಿದ ನಂತರ ಪಿಡಿಒ ಆಗಮಿಸಿದರಾದರೂ ಗ್ರಾಮಸಭೆ ನಡೆಸಲು ಗ್ರಾಮಸ್ಥರ ಕೋರಂ ಇಲ್ಲದ ಕಾರಣ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆ ಮುಂದೂಡಿದರು.

ವೇದಿಕೆಯಲ್ಲಿ ನಿಯೋಜಿತ ಪಿಡಿಒ, ಉಪಾಧ್ಯಕ್ಷ ಪ್ರಭಾಕರ್, ಪಂ. ಸದಸ್ಯರು, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!