ಬೆಳ್ತಂಗಡಿ: ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಸೆ.22 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಚಾಕೋ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಮಂಜು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಂಬತ್ತು ಮಂದಿ ಗರ್ಭಿಣಿಯರಾದ ಪ್ರಮೀಳಾ, ಫಾತಿಮಾತ್ ತ್ವಾಹೀರ, ಕವಿತಾ, ತ್ರಿಪುಣ್ಯ, ಅಶ್ವಿನಿ, ಅಂಬಿಕಾ, ಶ್ವೇತಾ, ಭವ್ಯಶ್ರೀ ಮತ್ತು ಶೋಭಾ ಅವರಿಗೆ
ಸೀಮಂತ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ ಸದಸ್ಯರು, ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.


ಆಹಾರ ಪದಾರ್ಥಗಳಿಂದ, ಧಾನ್ಯಗಳಿಂದ ರಂಗೋಲಿ ಹಾಕಿ ಅಲಂಕಾರಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಅಂಗನವಾಡಿ ಕಾರ್ಯಕರ್ತೆ ಸಂಗೀತಾ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಇದರೊಂದಿಗೆ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕರಾದ ಜಯಾನಂದ ನಿರೂಪಿಸಿದರು.











