22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

ಬೆಳ್ತಂಗಡಿ: ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಸೆ.22 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಚಾಕೋ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಮಂಜು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಂಬತ್ತು ಮಂದಿ ಗರ್ಭಿಣಿಯರಾದ ಪ್ರಮೀಳಾ, ಫಾತಿಮಾತ್ ತ್ವಾಹೀರ, ಕವಿತಾ, ತ್ರಿಪುಣ್ಯ, ಅಶ್ವಿನಿ, ಅಂಬಿಕಾ, ಶ್ವೇತಾ, ಭವ್ಯಶ್ರೀ ಮತ್ತು ಶೋಭಾ ಅವರಿಗೆ
ಸೀಮಂತ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ ಸದಸ್ಯರು, ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಆಹಾರ ಪದಾರ್ಥಗಳಿಂದ, ಧಾನ್ಯಗಳಿಂದ ರಂಗೋಲಿ ಹಾಕಿ‌ ಅಲಂಕಾರಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಅಂಗನವಾಡಿ ಕಾರ್ಯಕರ್ತೆ ಸಂಗೀತಾ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಇದರೊಂದಿಗೆ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕರಾದ ಜಯಾನಂದ ನಿರೂಪಿಸಿದರು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!