September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

ಮಿತ್ತಬಾಗಿಲು: ವರದಿ ವರ್ಷದಲ್ಲಿ ಸಂಘವು 1,983 ಕೋಟಿ ರೂ.ಗಿಂತ ಅಧಿಕ ವ್ಯವಹಾರವನ್ನು ನಡೆಸಿದ್ದು 4.81 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ.ಈ ಬಾರಿ ಸಂಘದ ಸದಸ್ಯರಿಗೆ ಶೇ. 18 ಡಿವಿಡೆಂಟ್ ನೀಡಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಹೇಳಿದರು.

ಅವರು ಸೆ.22ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ 49ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,518 ಎ ತರಗತಿ ಸದಸ್ಯರಿದ್ದು, 7.38 ಕೋಟಿಗಿಂತ ಅಧಿಕ ಪಾಲು ಬಂಡವಾಳ ಸಂಗ್ರಹಿಸಿದೆ. 143 ಕೋಟಿ ರೂ.ಗಿಂತ ಅಧಿಕ ಠೇವಣಾತಿಗಳನ್ನು ಹೊಂದಿದೆ. ಎಂಕೆಸಿಸಿ, ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ, ವೈಯಕ್ತಿಕ ಸಾಲ, ಪಶುಸಂಗೋಪನ ಸಾಲ, ಭೂಮಿ ಖರೀದಿ ಸಾಲ, ಗ್ರಾಹಕ ವಸ್ತು ಸಾಲ, ಸೌಭಾಗ್ಯ ಕಿರು ಸಾಲ, ವೇತನ ಆಧಾರಿತ ಸಾಲ ಅಡಮಾನ ಸಾಲ, ಮನೆ ನಿರ್ಮಾಣ ಮತ್ತು ಮನೆ ರಿಪೇರಿ ಸೇರಿದಂತೆ ಸದಸ್ಯರಿಗೆ ನಾನಾ ರೀತಿಯ ಸಾಲಗಳನ್ನು ವಿತರಿಸಲಾಗಿದ್ದು ವರದಿ ಸಾಲಿನಲ್ಲಿ ಶೇ. 99.10 ಸಾಲ ವಸೂಲಾಗಿರುತ್ತದೆ ಎಂದರು.


ಸಂಘವು ಬಂಗಾಡಿಯಲ್ಲಿ ಮುಖ್ಯ ಕಚೇರಿ ಹೊಂದಿದ್ದು ನಾವೂರು, ಕನ್ಯಾಡಿ, ಕಡಿರುದ್ಯಾವರ, ಮಿತ್ತಬಾಗಿಲು,ದಿಡುಪೆ, ಕಿಲ್ಲೂರು, ಇಂದಬೆಟ್ಟು ಹಾಗೂ ಪಡ್ಪು ಎಂಬಲ್ಲಿ ಶಾಖೆಗಳನ್ನು ಹೊಂದಿದ್ದು ರಬ್ಬರ್ ಖರೀದಿ, ಅಡಕೆ ಖರೀದಿ, ರಸಗೊಬ್ಬರ ಮಾರಾಟ, ಆರ್‌ ಟಿಜಿಎಸ್, ಸೇಫ್ ಲಾಕರ್, ಪಹಣಿ ಪತ್ರ ನೀಡಿಕೆ ಮೊದಲಾದ ವ್ಯವಹಾರಗಳನ್ನು ನಡೆಸುತ್ತಿದೆ ಎಂದರು.

ಉಪಾಧ್ಯಕ್ಷ ಕೆ.ಆನಂದ ಗೌಡ, ನಿರ್ದೇಶಕರಾದ ಕೆ. ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ,ವಿನಯಚಂದ್ರ, ರಘುನಾಥ, ಸತೀಶ್ ನಾಯ್ಕ,ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ವೇದಾವತಿ ಹಾಗೂ ಸಿಇಒ ದಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಸಿಬ್ಬಂದಿ ರಮಾನಂದ ಕಾರ್ಯಕ್ರಮ ನಿರ್ವಹಿಸಿದರು.

Related posts

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!