37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇ.ಧ. ಗ್ರಾ.ಯೋಜನೆ, ಬಿ. ಸಿ ಟ್ರಸ್ಟ್, (ರಿ.) ಗುರುವಾಯನಕೆರೆ ಇದರ ಆಶ್ರಯದಲ್ಲಿ ಬಡಗಕಾರಂದೂರು ‘ಬಿ’ ಒಕ್ಕೂಟದ ತ್ರೈಮಾಸಿಕ ಸಭೆಯು ಸೆ.21 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದೂರು ಇಲ್ಲಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಒಕ್ಕೂಟದ ಜವಾಬ್ದಾರಿ ತಂಡವಾದ ಶ್ರೀಮತಾ ಸಂಘದ ಸದಸ್ಯರಿಂದ ದೀಪ ಪ್ರಜ್ವಲನೆ ಮೂಲಕ ಸಭೆಯು ಆರಂಭವಾಯಿತು. ಸಂಘದ ವರದಿಯನ್ನು ಸದಸ್ಯರಾದ ಯಶೋದ ಓದಿದರು. ವಲಯದ ಮೇಲ್ವಿಚಾರಕರಾದ ಯಶೋದ ಯಂ. ಮಾತನಾಡಿ ಸಂಘದ ನಿರ್ವಹಣೆ, ಭಾಗವಹಿಸುವಿಕೆ, ಯೋಜನೆ ನಡೆದು ಬಂದ ಹಾದಿ, ವಿವಿಧ ಸೇವಾ ಕಾರ್ಯಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅನುದಾನ, ಪ್ರಗತಿ ರಕ್ಷಾ ಕವಚ ಹಾಗೂ ಇನ್ನೂ ಅನೇಕ ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು ಸಭೆಯಲ್ಲಿ ಜನಜಾಗೃತಿ ಅಧ್ಯಕ್ಷರಾದ ಯಶೋಧರ ಸುವರ್ಣ ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜೊತೆ ಕಾರ್ಯದರ್ಶಿ ಶಾರದ, ಪದಾಧಿಕಾರಿಗಳು ಉಪಸ್ಥಿತರಿದ್ದರು ಅಶ್ವಥ್ ಆಚಾರ್ಯ ಕೆದ್ದು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya
error: Content is protected !!