22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಬಳಂಜ : ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ಸೆ.19ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಪಂಚಾಯತ್ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷರು ಮಹಾಸಭೆಯನ್ನು ಉದ್ಘಾಟಿಸಿದರು. ಪ್ರಸನ್ನ ಉದ್ಘಾಟನಾ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಜೀವಿನಿ ಯ ಧ್ಯೇಯೋದ್ದೇಶ ಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ವಿಮಲಾ ಒಕ್ಕೂಟದ ವಾರ್ಷಿಕ ವರದಿ ಯನ್ನು ಮಂಡಿಸಿದರು.

ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಭಾರತಿ ಶಾಸನ ಬದ್ಧ ಲೆಕ್ಕ ಪರಿಶೋಧನೆಯ ವರದಿಯನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಚ್ಚತೆ ಬಗ್ಗೆ, ಘಟಕದ ಬಗ್ಗೆ, ಮಾಹಿತಿ ಯನ್ನು ನೀಡಿದರು.ಶ್ರೀ ಕಲಾ VPRP concept seeding ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯನ್ನು ನಡೆಸಲಾಯಿತು.ನಿರ್ಗಮಿತ ಸದಸ್ಯರು ಗಳನ್ನು ಗೌರವಿಸಲಾಯಿತು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಹಾಗೂ BRP-PRI ಶ್ರೀ ಕಲಾ ರವರನ್ನೂ ಗೌರವಿಸಲಾಯಿತು.ನಂತರ ವಲಯ ಮೇಲ್ವಿಚಾರಕ ರು “ವ್ಯಸನ ಮುಕ್ತ ಕರ್ನಾಟಕ ‘ ದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.


“ಸ್ವಚ್ಛತಾ ಹೀ ಸೇವಾ ” ಕಾರ್ಯಕ್ರಮ ದಡಿ ಪ್ರತಿಜ್ಞಾ ವಿಧಿ ಯನ್ನು ಕೈಗೊಳ್ಳಲಾಯಿತು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು. ಸ್ವಚ್ಛ ವಾಹಿನಿಯ ಚಾಲಕಿ, ನವಶಕ್ತೀ ಸಂಘದ ಸದಸ್ಯೆ ಶ್ರೀಮತಿ ಭಾರತಿ ರವರ ಪ್ರಾರ್ಥಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಅಶ್ವಿನಿ ಸ್ವಾಗತಿಸಿದರು. ಬೇಬಿ ಧನ್ಯವಾದವಿತ್ತರು.

Related posts

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!