25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಬಳಂಜ : ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ಸೆ.19ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಪಂಚಾಯತ್ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷರು ಮಹಾಸಭೆಯನ್ನು ಉದ್ಘಾಟಿಸಿದರು. ಪ್ರಸನ್ನ ಉದ್ಘಾಟನಾ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಜೀವಿನಿ ಯ ಧ್ಯೇಯೋದ್ದೇಶ ಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ವಿಮಲಾ ಒಕ್ಕೂಟದ ವಾರ್ಷಿಕ ವರದಿ ಯನ್ನು ಮಂಡಿಸಿದರು.

ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಭಾರತಿ ಶಾಸನ ಬದ್ಧ ಲೆಕ್ಕ ಪರಿಶೋಧನೆಯ ವರದಿಯನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಚ್ಚತೆ ಬಗ್ಗೆ, ಘಟಕದ ಬಗ್ಗೆ, ಮಾಹಿತಿ ಯನ್ನು ನೀಡಿದರು.ಶ್ರೀ ಕಲಾ VPRP concept seeding ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯನ್ನು ನಡೆಸಲಾಯಿತು.ನಿರ್ಗಮಿತ ಸದಸ್ಯರು ಗಳನ್ನು ಗೌರವಿಸಲಾಯಿತು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಹಾಗೂ BRP-PRI ಶ್ರೀ ಕಲಾ ರವರನ್ನೂ ಗೌರವಿಸಲಾಯಿತು.ನಂತರ ವಲಯ ಮೇಲ್ವಿಚಾರಕ ರು “ವ್ಯಸನ ಮುಕ್ತ ಕರ್ನಾಟಕ ‘ ದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.


“ಸ್ವಚ್ಛತಾ ಹೀ ಸೇವಾ ” ಕಾರ್ಯಕ್ರಮ ದಡಿ ಪ್ರತಿಜ್ಞಾ ವಿಧಿ ಯನ್ನು ಕೈಗೊಳ್ಳಲಾಯಿತು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು. ಸ್ವಚ್ಛ ವಾಹಿನಿಯ ಚಾಲಕಿ, ನವಶಕ್ತೀ ಸಂಘದ ಸದಸ್ಯೆ ಶ್ರೀಮತಿ ಭಾರತಿ ರವರ ಪ್ರಾರ್ಥಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಅಶ್ವಿನಿ ಸ್ವಾಗತಿಸಿದರು. ಬೇಬಿ ಧನ್ಯವಾದವಿತ್ತರು.

Related posts

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!