September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಬಳಂಜ : ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ಸೆ.19ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಪಂಚಾಯತ್ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷರು ಮಹಾಸಭೆಯನ್ನು ಉದ್ಘಾಟಿಸಿದರು. ಪ್ರಸನ್ನ ಉದ್ಘಾಟನಾ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಜೀವಿನಿ ಯ ಧ್ಯೇಯೋದ್ದೇಶ ಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ವಿಮಲಾ ಒಕ್ಕೂಟದ ವಾರ್ಷಿಕ ವರದಿ ಯನ್ನು ಮಂಡಿಸಿದರು.

ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಭಾರತಿ ಶಾಸನ ಬದ್ಧ ಲೆಕ್ಕ ಪರಿಶೋಧನೆಯ ವರದಿಯನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಚ್ಚತೆ ಬಗ್ಗೆ, ಘಟಕದ ಬಗ್ಗೆ, ಮಾಹಿತಿ ಯನ್ನು ನೀಡಿದರು.ಶ್ರೀ ಕಲಾ VPRP concept seeding ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯನ್ನು ನಡೆಸಲಾಯಿತು.ನಿರ್ಗಮಿತ ಸದಸ್ಯರು ಗಳನ್ನು ಗೌರವಿಸಲಾಯಿತು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಹಾಗೂ BRP-PRI ಶ್ರೀ ಕಲಾ ರವರನ್ನೂ ಗೌರವಿಸಲಾಯಿತು.ನಂತರ ವಲಯ ಮೇಲ್ವಿಚಾರಕ ರು “ವ್ಯಸನ ಮುಕ್ತ ಕರ್ನಾಟಕ ‘ ದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.


“ಸ್ವಚ್ಛತಾ ಹೀ ಸೇವಾ ” ಕಾರ್ಯಕ್ರಮ ದಡಿ ಪ್ರತಿಜ್ಞಾ ವಿಧಿ ಯನ್ನು ಕೈಗೊಳ್ಳಲಾಯಿತು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು. ಸ್ವಚ್ಛ ವಾಹಿನಿಯ ಚಾಲಕಿ, ನವಶಕ್ತೀ ಸಂಘದ ಸದಸ್ಯೆ ಶ್ರೀಮತಿ ಭಾರತಿ ರವರ ಪ್ರಾರ್ಥಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಸದಸ್ಯೆ ಶ್ರೀಮತಿ ಅಶ್ವಿನಿ ಸ್ವಾಗತಿಸಿದರು. ಬೇಬಿ ಧನ್ಯವಾದವಿತ್ತರು.

Related posts

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!