26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

ಕೊಕ್ಕಡ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಕೊಕ್ಕಡ ಗ್ರಾಮದ ಗ್ರಾಮ ಸಮಿತಿಯನ್ನು ಸೆ.21 ರಂದು ಕೊಕ್ಕಡದ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಘಟಕದ ಗೌರವ ಸಲಹೆಗಾರ ಗೋಪಾಲಕೃಷ್ಣ ಕುಕ್ಕಳ, ಪ್ರಧಾನ ಕಾರ್ಯದರ್ಶಿ ಶೇಖರ್ ವಿ. ಧರ್ಮಸ್ಥಳ, ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನ ಕೊಕ್ಕಡ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗಿರೀಶ್ ಶಬರಾಡಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕುಕ್ಕಳ ಪ್ರಸ್ತಾವಿಕವಾಗಿ ಮಾತಾಡುತ್ತಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿನ್ನೆಲೆ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಈ ಸಮಸ್ಯೆಗಳನ್ನು ಎದುರಿಸಲು ಆದಿದ್ರಾವಿಡ ಸಮುದಾಯ ಸಂಘಟಿತರಾಗಬೇಕಾದ ಅನಿವಾರ್ಯತೆಯನ್ನು ಸಭೆಗೆ ವಿವರಿಸಿದರು.

ತಾಲೂಕು ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ ನಮ್ಮಲ್ಲಿರುವ ಉತ್ತಮ ನಡವಳಿಕೆ, ವ್ಯಕ್ತಿತ್ವ, ಜೀವನ ಪದ್ದತಿ, ಆಚಾರ-ವಿಚಾರಗಳಿಂದ ಮಾತ್ರ ನಮಗೆ ಸಮಾಜದಲ್ಲಿ ಗೌರವ ದೊರೆಯುತ್ತದೆ. ಪ್ರಮುಖವಾಗಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ, ಉನ್ನತ ಪದವಿ, ಶ್ರೇಣಿ, ಮತ್ತು ಹುದ್ದೆಯನ್ನು ಪಡೆಯುವುದರೊಂದಿಗೆ, ರಾಜ್ಯ ಸಂಘಟನೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟಕ್ಕೆ ತಲುಪಿಸುವ ಮೂಲಕ ಸಮುದಾಯವನ್ನು ಬಲಪಡಿಸಿದರೆ, ನಾವು ಕೂಡ ಸಮಾಜದಲ್ಲಿ ಇತರ ಸಮುದಾಯಗಳಂತೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಿಕೀಯ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಕೊಕ್ಕಡ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷರಾಗಿ ಮೌನೇಶ್, ಉಪಾಧ್ಯಕ್ಷರಾಗಿ ಸಂಪತ್, ಕಾರ್ಯದರ್ಶಿಯಾಗಿ ಅನಿಲ್, ಜೊತೆಕಾರ್ಯದರ್ಶಿಯಾಗಿ ಅಭಿಜಿತ್, ಕೋಶಾಧಿಕಾರಿಯಾಗಿ ಜಯಂತ್, ಗೌರವಾಧ್ಯಕ್ಷರಾಗಿ ಗಿರೀಶ್ ಶಬರಾಡಿ, ಗೌರವ ಸಲಹೆಗಾರರಾಗಿ ವಿಶ್ವನಾಥ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರವೀಣ್, ಮಾಧವ, ಗುರುಪ್ರಸಾದ್, ಸಾಗರ್, ಗಣೇಶ್, ಕಿರಣ್, ನವೀನ್, ಸುದೀಪ್, ರಾಜೇಶ್, ರಮೇಶ್, ನವನೀತ್, ರಂಜಿತ್ ಇವರುಗಳು ಆಯ್ಕೆಯಾದರು.

ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya
error: Content is protected !!