July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಪ್ರಸಾದ್ ನೇತ್ರಾಲಯ ಉಡುಪಿ ಮತ್ತು. ಶ್ರೀದೇವಿ ಆಪ್ಟಿಕಲ್ಸ್ ಸಂತಕಟ್ಟೆ ಇವರ ಜಂಟಿ ಆಶ್ರಯದಲ್ಲಿ 580ನೇ ಸೇವಾ ಯೋಜನೆ ಬೃಹತ್‌ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ ಸೆ.28 ರಂದು ಬೆಳಿಗ್ಗೆ 9:30 ರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾವೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಡಾ|| ಪ್ರದೀಪ್ ಎ ಆರೋಗ್ಯ ಕ್ಲಿನಿಕ್ ನಾವೂರು, ಅಧ್ಯಕ್ಷತೆ ಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಉದ್ಘಾಟ ನೆಯನ್ನು ನೆರವೇರಿಸಲಿದ್ದಾರೆ.

ಶಿಬಿರದ ವಿಶೇಷತೆ : ಶಿಬಿರದಲ್ಲಿ ಇಸಿಜಿ ಲಭ್ಯ ಮತ್ತು ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು.
ಕಣ್ಣಿನ ಪೊರೆ ಶಸ್ತ್ರಚಿಕಿಸೆಗೆ ಆಯ್ಕೆಯಾದವರಿಗೆ ಗೊತ್ತು ಬಳಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ
ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರತಿಗೆ ಮಾಡಿಸಿ ಮರುದಿನ ವಾಪಸ್ ಕರೆತಂದು ಬಿಡಲಾಗುವುದು.
ಶಿಬಿರದಲ್ಲಿ ಕನ್ನಡಕದ ಅಗತ್ಯ ಇದ್ದವರಿಗೆ 1200 ರೂಪಾಯಿಗಳ ಕನ್ನಡಕವನ್ನು 500 ರೂಪಾಯಿ ನೀಡಲಾಗುವುದು.
ಶಿಬಿರದಲ್ಲಿ ಅಗತ್ಯವಿರುವ ಶಿಬಿರಾರ್ಥಿಗಳಿಗೆ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : ಸತೀಶ್ ಕಂಗಿತ್ತಿಲ್ಲ ಅಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು. ಮೊ : 9611577081
    ಪ್ರವೀಣ್ ಪಿಂಟು ಸೂರ್ಯ ಉಪಾಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಮೊ : 9740996797

    Related posts

    ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

    Suddi Udaya

    ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

    Suddi Udaya

    ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

    Suddi Udaya

    ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

    Suddi Udaya

    ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

    Suddi Udaya

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

    Suddi Udaya
    error: Content is protected !!