September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

ಬೆಳ್ತಂಗಡಿ: ನಮ್ಮ ಋಷಿ ಮುನಿಗಳು ಗೊತ್ರಗಳನ್ನು ನಿರ್ಧರಿಸಿದ್ದಾರೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಪ್ರತೀ ವ್ಯಕ್ತಿಯೂ ನಮ್ಮ ಋಷಿ ಮುನಿಗಳು ರೂಪಿಸಿದ ದಾರಿಯಲ್ಲಿ ಮುಂದುವರಿಯಬೇಕು. ಇದರಿಂದ ಜೀವನದಲ್ಲಿ ಸಂಸ್ಕಾರ ಆನಂದ ದೊರೆಯುತ್ತದೆ. ಮತ್ತು ಹಿರಿಯರ ನೆನಪುನೊಂದಿಗೆ ಕುಟುಂಬ ಪದ್ದತಿಯು ಬೆಳೆಯುತ್ತದೆ. ಪರಂಪರೆ ಸಂಸ್ಕ್ರತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಹಿರಿಯರು ನೀಡಿದ ಸಂಸ್ಕಾರವನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಹಿರಿಯ ವಿದ್ವಾಂಸ ಶ್ರೀನಿಧಿ ಅಮ್ಮಣ್ನಾಯ ಕೊಕ್ಕಡ ನುಡಿದರು.


ಅಡ್ಕಾಡಿ ಶ್ರೀಕರ ರಾವ್ ಅವರ ಮನೆಯಲ್ಲಿ ನಡೆದ ವಲಯ ಶಿವಳ್ಳಿ ಸಮಾಜದ ಸಭೆಯಲ್ಲಿ ಅವರು ಉಪನ್ಯಾಸ ನೀಡಿ ಮಾರ್ಗದರ್ಶನ ನೀಡಿದ್ದರು.


ಈ ಸಂದರ್ಭದಲ್ಲಿ ಅವರಿಗೆ ಸಮಾಜದ ವತಿಯಿಂದ ಅಭಿನಂದನೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಪುರಂದರ ರಾವ್ ವಹಿಸಿದ್ದರು.
ತಾಲೂಕು ಪ್ರತಿನಿಧಿ ಅಡ್ಕಾಡಿ ಸುಧೀರ ರಾವ್ ಸ್ವಾಗತಿಸಿದ್ದರು. ಸಭೆಯಲ್ಲಿ ಮಹಿಳಾ ಸಮಿತಿಯ ಪಧಾಧಿಕಾರಿಗಳು , ವಿವಿಧ ವಿಭಾಗದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

Related posts

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಡ್ಲಾಡಿ 35ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya
error: Content is protected !!