25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ಮೂಲಕ, ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ನೀಡುವ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಘಟಕದ ಅಧ್ಯಕ್ಷೆ ಜೇಸಿ ಎಚ್‌ಜಿಎಫ್ ಡಾ. ಶೋಭಾ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಡಿಯಲ್ಲಿ, 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ದಿವ್ಯಶ್ರೀ ಜೇಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆಯಡಿ ಆಯ್ಕೆಯಾಗಿದ್ದು, ತಿಂಗಳಿಗೆ ರೂ. 1000/- ದಂತೆ 10 ತಿಂಗಳು, ಈಂತೆ 3 ವರ್ಷಗಳ ಕಾಲ ಒಟ್ಟು ರೂ. 30,000/- ವಿದ್ಯಾರ್ಥಿವೇತನ ಪಡೆಯಲಿದ್ದಾರೆ.


ಮತ್ತು 10ನೇ ತರಗತಿಯ ಮತ್ತಿಬ್ಬರು ವಿದ್ಯಾರ್ಥಿನಿಯರಾದ ಕುಮಾರಿ ಕುಶಣ್ಯಾ ಹಾಗೂ ಕುಮಾರಿ ಸವಿತಾ ಅವರು ತಲಾ ರೂ. 3000/- ರ ಒಂದು ಬಾರಿ ವಿದ್ಯಾರ್ಥಿವೇತನಕ್ಕಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರೀನಾ ಎಸ್, ಎಲ್ಲಾ ಜೇಸಿಐ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದರು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya
error: Content is protected !!