23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

ಮಿತ್ತಬಾಗಿಲು: ವರದಿ ವರ್ಷದಲ್ಲಿ ಸಂಘವು 1,983 ಕೋಟಿ ರೂ.ಗಿಂತ ಅಧಿಕ ವ್ಯವಹಾರವನ್ನು ನಡೆಸಿದ್ದು 4.81 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ.ಈ ಬಾರಿ ಸಂಘದ ಸದಸ್ಯರಿಗೆ ಶೇ. 18 ಡಿವಿಡೆಂಟ್ ನೀಡಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಹೇಳಿದರು.

ಅವರು ಸೆ.22ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ 49ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,518 ಎ ತರಗತಿ ಸದಸ್ಯರಿದ್ದು, 7.38 ಕೋಟಿಗಿಂತ ಅಧಿಕ ಪಾಲು ಬಂಡವಾಳ ಸಂಗ್ರಹಿಸಿದೆ. 143 ಕೋಟಿ ರೂ.ಗಿಂತ ಅಧಿಕ ಠೇವಣಾತಿಗಳನ್ನು ಹೊಂದಿದೆ. ಎಂಕೆಸಿಸಿ, ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ, ವೈಯಕ್ತಿಕ ಸಾಲ, ಪಶುಸಂಗೋಪನ ಸಾಲ, ಭೂಮಿ ಖರೀದಿ ಸಾಲ, ಗ್ರಾಹಕ ವಸ್ತು ಸಾಲ, ಸೌಭಾಗ್ಯ ಕಿರು ಸಾಲ, ವೇತನ ಆಧಾರಿತ ಸಾಲ ಅಡಮಾನ ಸಾಲ, ಮನೆ ನಿರ್ಮಾಣ ಮತ್ತು ಮನೆ ರಿಪೇರಿ ಸೇರಿದಂತೆ ಸದಸ್ಯರಿಗೆ ನಾನಾ ರೀತಿಯ ಸಾಲಗಳನ್ನು ವಿತರಿಸಲಾಗಿದ್ದು ವರದಿ ಸಾಲಿನಲ್ಲಿ ಶೇ. 99.10 ಸಾಲ ವಸೂಲಾಗಿರುತ್ತದೆ ಎಂದರು.


ಸಂಘವು ಬಂಗಾಡಿಯಲ್ಲಿ ಮುಖ್ಯ ಕಚೇರಿ ಹೊಂದಿದ್ದು ನಾವೂರು, ಕನ್ಯಾಡಿ, ಕಡಿರುದ್ಯಾವರ, ಮಿತ್ತಬಾಗಿಲು,ದಿಡುಪೆ, ಕಿಲ್ಲೂರು, ಇಂದಬೆಟ್ಟು ಹಾಗೂ ಪಡ್ಪು ಎಂಬಲ್ಲಿ ಶಾಖೆಗಳನ್ನು ಹೊಂದಿದ್ದು ರಬ್ಬರ್ ಖರೀದಿ, ಅಡಕೆ ಖರೀದಿ, ರಸಗೊಬ್ಬರ ಮಾರಾಟ, ಆರ್‌ ಟಿಜಿಎಸ್, ಸೇಫ್ ಲಾಕರ್, ಪಹಣಿ ಪತ್ರ ನೀಡಿಕೆ ಮೊದಲಾದ ವ್ಯವಹಾರಗಳನ್ನು ನಡೆಸುತ್ತಿದೆ ಎಂದರು.

ಉಪಾಧ್ಯಕ್ಷ ಕೆ.ಆನಂದ ಗೌಡ, ನಿರ್ದೇಶಕರಾದ ಕೆ. ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ,ವಿನಯಚಂದ್ರ, ರಘುನಾಥ, ಸತೀಶ್ ನಾಯ್ಕ,ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ವೇದಾವತಿ ಹಾಗೂ ಸಿಇಒ ದಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಸಿಬ್ಬಂದಿ ರಮಾನಂದ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya
error: Content is protected !!