July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

ಮಿತ್ತಬಾಗಿಲು: ವರದಿ ವರ್ಷದಲ್ಲಿ ಸಂಘವು 1,983 ಕೋಟಿ ರೂ.ಗಿಂತ ಅಧಿಕ ವ್ಯವಹಾರವನ್ನು ನಡೆಸಿದ್ದು 4.81 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ.ಈ ಬಾರಿ ಸಂಘದ ಸದಸ್ಯರಿಗೆ ಶೇ. 18 ಡಿವಿಡೆಂಟ್ ನೀಡಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಹೇಳಿದರು.

ಅವರು ಸೆ.22ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ 49ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು 6,518 ಎ ತರಗತಿ ಸದಸ್ಯರಿದ್ದು, 7.38 ಕೋಟಿಗಿಂತ ಅಧಿಕ ಪಾಲು ಬಂಡವಾಳ ಸಂಗ್ರಹಿಸಿದೆ. 143 ಕೋಟಿ ರೂ.ಗಿಂತ ಅಧಿಕ ಠೇವಣಾತಿಗಳನ್ನು ಹೊಂದಿದೆ. ಎಂಕೆಸಿಸಿ, ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ, ವೈಯಕ್ತಿಕ ಸಾಲ, ಪಶುಸಂಗೋಪನ ಸಾಲ, ಭೂಮಿ ಖರೀದಿ ಸಾಲ, ಗ್ರಾಹಕ ವಸ್ತು ಸಾಲ, ಸೌಭಾಗ್ಯ ಕಿರು ಸಾಲ, ವೇತನ ಆಧಾರಿತ ಸಾಲ ಅಡಮಾನ ಸಾಲ, ಮನೆ ನಿರ್ಮಾಣ ಮತ್ತು ಮನೆ ರಿಪೇರಿ ಸೇರಿದಂತೆ ಸದಸ್ಯರಿಗೆ ನಾನಾ ರೀತಿಯ ಸಾಲಗಳನ್ನು ವಿತರಿಸಲಾಗಿದ್ದು ವರದಿ ಸಾಲಿನಲ್ಲಿ ಶೇ. 99.10 ಸಾಲ ವಸೂಲಾಗಿರುತ್ತದೆ ಎಂದರು.


ಸಂಘವು ಬಂಗಾಡಿಯಲ್ಲಿ ಮುಖ್ಯ ಕಚೇರಿ ಹೊಂದಿದ್ದು ನಾವೂರು, ಕನ್ಯಾಡಿ, ಕಡಿರುದ್ಯಾವರ, ಮಿತ್ತಬಾಗಿಲು,ದಿಡುಪೆ, ಕಿಲ್ಲೂರು, ಇಂದಬೆಟ್ಟು ಹಾಗೂ ಪಡ್ಪು ಎಂಬಲ್ಲಿ ಶಾಖೆಗಳನ್ನು ಹೊಂದಿದ್ದು ರಬ್ಬರ್ ಖರೀದಿ, ಅಡಕೆ ಖರೀದಿ, ರಸಗೊಬ್ಬರ ಮಾರಾಟ, ಆರ್‌ ಟಿಜಿಎಸ್, ಸೇಫ್ ಲಾಕರ್, ಪಹಣಿ ಪತ್ರ ನೀಡಿಕೆ ಮೊದಲಾದ ವ್ಯವಹಾರಗಳನ್ನು ನಡೆಸುತ್ತಿದೆ ಎಂದರು.

ಉಪಾಧ್ಯಕ್ಷ ಕೆ.ಆನಂದ ಗೌಡ, ನಿರ್ದೇಶಕರಾದ ಕೆ. ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ,ವಿನಯಚಂದ್ರ, ರಘುನಾಥ, ಸತೀಶ್ ನಾಯ್ಕ,ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ವೇದಾವತಿ ಹಾಗೂ ಸಿಇಒ ದಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಸಿಬ್ಬಂದಿ ರಮಾನಂದ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!