26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇ.ಧ. ಗ್ರಾ.ಯೋಜನೆ, ಬಿ. ಸಿ ಟ್ರಸ್ಟ್, (ರಿ.) ಗುರುವಾಯನಕೆರೆ ಇದರ ಆಶ್ರಯದಲ್ಲಿ ಬಡಗಕಾರಂದೂರು ‘ಬಿ’ ಒಕ್ಕೂಟದ ತ್ರೈಮಾಸಿಕ ಸಭೆಯು ಸೆ.21 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದೂರು ಇಲ್ಲಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಒಕ್ಕೂಟದ ಜವಾಬ್ದಾರಿ ತಂಡವಾದ ಶ್ರೀಮತಾ ಸಂಘದ ಸದಸ್ಯರಿಂದ ದೀಪ ಪ್ರಜ್ವಲನೆ ಮೂಲಕ ಸಭೆಯು ಆರಂಭವಾಯಿತು. ಸಂಘದ ವರದಿಯನ್ನು ಸದಸ್ಯರಾದ ಯಶೋದ ಓದಿದರು. ವಲಯದ ಮೇಲ್ವಿಚಾರಕರಾದ ಯಶೋದ ಯಂ. ಮಾತನಾಡಿ ಸಂಘದ ನಿರ್ವಹಣೆ, ಭಾಗವಹಿಸುವಿಕೆ, ಯೋಜನೆ ನಡೆದು ಬಂದ ಹಾದಿ, ವಿವಿಧ ಸೇವಾ ಕಾರ್ಯಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅನುದಾನ, ಪ್ರಗತಿ ರಕ್ಷಾ ಕವಚ ಹಾಗೂ ಇನ್ನೂ ಅನೇಕ ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು ಸಭೆಯಲ್ಲಿ ಜನಜಾಗೃತಿ ಅಧ್ಯಕ್ಷರಾದ ಯಶೋಧರ ಸುವರ್ಣ ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜೊತೆ ಕಾರ್ಯದರ್ಶಿ ಶಾರದ, ಪದಾಧಿಕಾರಿಗಳು ಉಪಸ್ಥಿತರಿದ್ದರು ಅಶ್ವಥ್ ಆಚಾರ್ಯ ಕೆದ್ದು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!