ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಸೆ. 21ರಂದು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.











