July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

ಕೊಕ್ಕಡ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಕೊಕ್ಕಡ ಗ್ರಾಮದ ಗ್ರಾಮ ಸಮಿತಿಯನ್ನು ಸೆ.21 ರಂದು ಕೊಕ್ಕಡದ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಘಟಕದ ಗೌರವ ಸಲಹೆಗಾರ ಗೋಪಾಲಕೃಷ್ಣ ಕುಕ್ಕಳ, ಪ್ರಧಾನ ಕಾರ್ಯದರ್ಶಿ ಶೇಖರ್ ವಿ. ಧರ್ಮಸ್ಥಳ, ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನ ಕೊಕ್ಕಡ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯ ಗಿರೀಶ್ ಶಬರಾಡಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕುಕ್ಕಳ ಪ್ರಸ್ತಾವಿಕವಾಗಿ ಮಾತಾಡುತ್ತಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿನ್ನೆಲೆ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಈ ಸಮಸ್ಯೆಗಳನ್ನು ಎದುರಿಸಲು ಆದಿದ್ರಾವಿಡ ಸಮುದಾಯ ಸಂಘಟಿತರಾಗಬೇಕಾದ ಅನಿವಾರ್ಯತೆಯನ್ನು ಸಭೆಗೆ ವಿವರಿಸಿದರು.

ತಾಲೂಕು ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ ನಮ್ಮಲ್ಲಿರುವ ಉತ್ತಮ ನಡವಳಿಕೆ, ವ್ಯಕ್ತಿತ್ವ, ಜೀವನ ಪದ್ದತಿ, ಆಚಾರ-ವಿಚಾರಗಳಿಂದ ಮಾತ್ರ ನಮಗೆ ಸಮಾಜದಲ್ಲಿ ಗೌರವ ದೊರೆಯುತ್ತದೆ. ಪ್ರಮುಖವಾಗಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ, ಉನ್ನತ ಪದವಿ, ಶ್ರೇಣಿ, ಮತ್ತು ಹುದ್ದೆಯನ್ನು ಪಡೆಯುವುದರೊಂದಿಗೆ, ರಾಜ್ಯ ಸಂಘಟನೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟಕ್ಕೆ ತಲುಪಿಸುವ ಮೂಲಕ ಸಮುದಾಯವನ್ನು ಬಲಪಡಿಸಿದರೆ, ನಾವು ಕೂಡ ಸಮಾಜದಲ್ಲಿ ಇತರ ಸಮುದಾಯಗಳಂತೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಿಕೀಯ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಕೊಕ್ಕಡ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷರಾಗಿ ಮೌನೇಶ್, ಉಪಾಧ್ಯಕ್ಷರಾಗಿ ಸಂಪತ್, ಕಾರ್ಯದರ್ಶಿಯಾಗಿ ಅನಿಲ್, ಜೊತೆಕಾರ್ಯದರ್ಶಿಯಾಗಿ ಅಭಿಜಿತ್, ಕೋಶಾಧಿಕಾರಿಯಾಗಿ ಜಯಂತ್, ಗೌರವಾಧ್ಯಕ್ಷರಾಗಿ ಗಿರೀಶ್ ಶಬರಾಡಿ, ಗೌರವ ಸಲಹೆಗಾರರಾಗಿ ವಿಶ್ವನಾಥ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರವೀಣ್, ಮಾಧವ, ಗುರುಪ್ರಸಾದ್, ಸಾಗರ್, ಗಣೇಶ್, ಕಿರಣ್, ನವೀನ್, ಸುದೀಪ್, ರಾಜೇಶ್, ರಮೇಶ್, ನವನೀತ್, ರಂಜಿತ್ ಇವರುಗಳು ಆಯ್ಕೆಯಾದರು.

ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!