ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಪ್ರಸಾದ್ ನೇತ್ರಾಲಯ ಉಡುಪಿ ಮತ್ತು. ಶ್ರೀದೇವಿ ಆಪ್ಟಿಕಲ್ಸ್ ಸಂತಕಟ್ಟೆ ಇವರ ಜಂಟಿ ಆಶ್ರಯದಲ್ಲಿ 580ನೇ ಸೇವಾ ಯೋಜನೆ ಬೃಹತ್‌ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ ಸೆ.28 ರಂದು ಬೆಳಿಗ್ಗೆ 9:30 ರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾವೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಡಾ|| ಪ್ರದೀಪ್ ಎ ಆರೋಗ್ಯ ಕ್ಲಿನಿಕ್ ನಾವೂರು, ಅಧ್ಯಕ್ಷತೆ ಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಉದ್ಘಾಟ ನೆಯನ್ನು ನೆರವೇರಿಸಲಿದ್ದಾರೆ.

ಶಿಬಿರದ ವಿಶೇಷತೆ : ಶಿಬಿರದಲ್ಲಿ ಇಸಿಜಿ ಲಭ್ಯ ಮತ್ತು ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು.
ಕಣ್ಣಿನ ಪೊರೆ ಶಸ್ತ್ರಚಿಕಿಸೆಗೆ ಆಯ್ಕೆಯಾದವರಿಗೆ ಗೊತ್ತು ಬಳಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ
ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರತಿಗೆ ಮಾಡಿಸಿ ಮರುದಿನ ವಾಪಸ್ ಕರೆತಂದು ಬಿಡಲಾಗುವುದು.
ಶಿಬಿರದಲ್ಲಿ ಕನ್ನಡಕದ ಅಗತ್ಯ ಇದ್ದವರಿಗೆ 1200 ರೂಪಾಯಿಗಳ ಕನ್ನಡಕವನ್ನು 500 ರೂಪಾಯಿ ನೀಡಲಾಗುವುದು.
ಶಿಬಿರದಲ್ಲಿ ಅಗತ್ಯವಿರುವ ಶಿಬಿರಾರ್ಥಿಗಳಿಗೆ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : ಸತೀಶ್ ಕಂಗಿತ್ತಿಲ್ಲ ಅಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು. ಮೊ : 9611577081
    ಪ್ರವೀಣ್ ಪಿಂಟು ಸೂರ್ಯ ಉಪಾಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಮೊ : 9740996797

    Related posts

    ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

    Suddi Udaya

    ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

    Suddi Udaya

    ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

    Suddi Udaya

    ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

    Suddi Udaya

    ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

    Suddi Udaya

    ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

    Suddi Udaya
    error: Content is protected !!