23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya
error: Content is protected !!