23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
error: Content is protected !!