July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!