September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!