23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸೂಚನೆಯಂತೆ ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾಸಂಘ ಇದರ ಆಶಯದಂತೆ ಸಮೀಕ್ಷೆಯ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು, ಉಪಜಾತಿ ಕಾಲಂನಲ್ಲಿ “ಗೌಡ” ಎಂದೂ, ಮಾತೃಭಾಷೆ ಕಾಲಂನಲ್ಲಿ ಪ್ರಾದೇಶಿಕ ಭಾಷೆಗಳಾದ ಕನ್ನಡ, ತುಳು ಇವುಗಳಲ್ಲಿ ಮಾತೃಭಾಷೆಯನ್ನು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ತಿಳಿಸಿದ್ದಾರೆ.

ಒಕ್ಕಲಿಗ ಗೌಡ ಸಮಾಜದ ಕೋಡ್ ಸಂಖ್ಯೆ ಎ-1541 ಆಗಿದ್ದು, ಇದನ್ನು ಸಹ ಗಮನಿಸಿಕೊಂಡು ನಾವು ಕೊಡುವ ಮಾಹಿತಿ ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿರುತ್ತದೆ. ಏಕೆಂದರೆ ವಕ್ಕಲಿಗ ಎಂಬ ಇನ್ನೊಂದು ಸಮುದಾಯವಿದ್ದು, ಅದರ ಕೋಡ್ ಸಂಖ್ಯೆ ಬೇರೆಯೇ ಆಗಿರುತ್ತದೆ. ಪ್ರತಿಯೊಬ್ಬರು ಒಬ್ಬರಿಗೊಬ್ಬರು ಈ ಮಾಹಿತಿಯನ್ನು ಹಂಚಿಕೊಂಡು ನಮ್ಮ ಸಮಾಜದ ಪ್ರತಿಯೊಬ್ಬರು ಒಂದೇ ರೀತಿಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!