22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸೂಚನೆಯಂತೆ ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾಸಂಘ ಇದರ ಆಶಯದಂತೆ ಸಮೀಕ್ಷೆಯ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು, ಉಪಜಾತಿ ಕಾಲಂನಲ್ಲಿ “ಗೌಡ” ಎಂದೂ, ಮಾತೃಭಾಷೆ ಕಾಲಂನಲ್ಲಿ ಪ್ರಾದೇಶಿಕ ಭಾಷೆಗಳಾದ ಕನ್ನಡ, ತುಳು ಇವುಗಳಲ್ಲಿ ಮಾತೃಭಾಷೆಯನ್ನು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ತಿಳಿಸಿದ್ದಾರೆ.

ಒಕ್ಕಲಿಗ ಗೌಡ ಸಮಾಜದ ಕೋಡ್ ಸಂಖ್ಯೆ ಎ-1541 ಆಗಿದ್ದು, ಇದನ್ನು ಸಹ ಗಮನಿಸಿಕೊಂಡು ನಾವು ಕೊಡುವ ಮಾಹಿತಿ ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿರುತ್ತದೆ. ಏಕೆಂದರೆ ವಕ್ಕಲಿಗ ಎಂಬ ಇನ್ನೊಂದು ಸಮುದಾಯವಿದ್ದು, ಅದರ ಕೋಡ್ ಸಂಖ್ಯೆ ಬೇರೆಯೇ ಆಗಿರುತ್ತದೆ. ಪ್ರತಿಯೊಬ್ಬರು ಒಬ್ಬರಿಗೊಬ್ಬರು ಈ ಮಾಹಿತಿಯನ್ನು ಹಂಚಿಕೊಂಡು ನಮ್ಮ ಸಮಾಜದ ಪ್ರತಿಯೊಬ್ಬರು ಒಂದೇ ರೀತಿಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!