25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಪ್ರಾರಂಭಿಸಿರುತ್ತದೆ. ಸಮೀಕ್ಷೆ ನಡೆಸುವವರು ತಮ್ಮ ಮನೆಗೆ ಬಂದಾಗ ಈ ಕೆಳಗಿನಂತೆ ಮಾಹಿತಿಯನ್ನು ನೀಡಬೇಕಾಗಿ ಬಂಟರ ಸಂಘದಿಂದ ತಿಳಿಸಲಾಗಿದೆ.

ಸಮೀಕ್ಷೆ ನಡೆಸುವವರ ಮೊಬೈಲ್ ಆಪ್‌ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಬೇಕು. 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A -0227)ರಂತೆ ಬಂಟ (Bunt) ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿರುವ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ (Nadava) ಎಂದು ನಮೂದಿಸಬೇಕು.

ಬಂಟರಲ್ಲಿ ಶೆಟ್ಟಿ, ಆಳ್ವ, ಸಾಮಾನಿ, ಭಂಡಾರಿ, ಅಡಪ, ಅಡ್ಯಂತಾಯ, ಪೂಂಜ, ಚೌಟಿ ಮುಂತಾದ ಕುಲನಾಮಗಳು (Surname) ಇದ್ದು ಇವುಗಳು ಜಾತಿ ಸೂಚಕ ಪದಗಳು ಆಗಿರುವುದಿಲ್ಲ. ಆದುದರಿಂದ ಎಲ್ಲಿಯೂ ತಮ್ಮ ಕುಲನಾಮಗಳನ್ನು ಪ್ರಸ್ತಾಪಿಸದೇ ಜಾತಿ ಕಾಲಂನಲ್ಲಿ ಬಂಟ ಎಂಬುದಾಗಿಯೂ ಸಮಾನಾರ್ಥದ (ಪರ್ಯಾಯ) ಹೆಸರು ಎಂಬಲ್ಲಿ ನಾಡವ ಎಂಬುದಾಗಿಯೂ ನಮೂದಿಸತಕ್ಕದ್ದು.

ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಈ ಜಾತಿ ಸಮೀಕ್ಷೆ ಅತ್ಯಂತ ಪ್ರಾಮುಖ್ಯವಾಗಿದ್ದು ಪ್ರತಿಯೊಬ್ಬರೂ ಮೇಲೆ ತಿಳಿಸಿದಂತೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡ ತಿಳಿಸಿದ್ದದಾರೆ.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya
error: Content is protected !!