July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಪ್ರಾರಂಭಿಸಿರುತ್ತದೆ. ಸಮೀಕ್ಷೆ ನಡೆಸುವವರು ತಮ್ಮ ಮನೆಗೆ ಬಂದಾಗ ಈ ಕೆಳಗಿನಂತೆ ಮಾಹಿತಿಯನ್ನು ನೀಡಬೇಕಾಗಿ ಬಂಟರ ಸಂಘದಿಂದ ತಿಳಿಸಲಾಗಿದೆ.

ಸಮೀಕ್ಷೆ ನಡೆಸುವವರ ಮೊಬೈಲ್ ಆಪ್‌ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಬೇಕು. 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A -0227)ರಂತೆ ಬಂಟ (Bunt) ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿರುವ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ (Nadava) ಎಂದು ನಮೂದಿಸಬೇಕು.

ಬಂಟರಲ್ಲಿ ಶೆಟ್ಟಿ, ಆಳ್ವ, ಸಾಮಾನಿ, ಭಂಡಾರಿ, ಅಡಪ, ಅಡ್ಯಂತಾಯ, ಪೂಂಜ, ಚೌಟಿ ಮುಂತಾದ ಕುಲನಾಮಗಳು (Surname) ಇದ್ದು ಇವುಗಳು ಜಾತಿ ಸೂಚಕ ಪದಗಳು ಆಗಿರುವುದಿಲ್ಲ. ಆದುದರಿಂದ ಎಲ್ಲಿಯೂ ತಮ್ಮ ಕುಲನಾಮಗಳನ್ನು ಪ್ರಸ್ತಾಪಿಸದೇ ಜಾತಿ ಕಾಲಂನಲ್ಲಿ ಬಂಟ ಎಂಬುದಾಗಿಯೂ ಸಮಾನಾರ್ಥದ (ಪರ್ಯಾಯ) ಹೆಸರು ಎಂಬಲ್ಲಿ ನಾಡವ ಎಂಬುದಾಗಿಯೂ ನಮೂದಿಸತಕ್ಕದ್ದು.

ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಈ ಜಾತಿ ಸಮೀಕ್ಷೆ ಅತ್ಯಂತ ಪ್ರಾಮುಖ್ಯವಾಗಿದ್ದು ಪ್ರತಿಯೊಬ್ಬರೂ ಮೇಲೆ ತಿಳಿಸಿದಂತೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡ ತಿಳಿಸಿದ್ದದಾರೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya
error: Content is protected !!