23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಪ್ರಾರಂಭಿಸಿರುತ್ತದೆ. ಸಮೀಕ್ಷೆ ನಡೆಸುವವರು ತಮ್ಮ ಮನೆಗೆ ಬಂದಾಗ ಈ ಕೆಳಗಿನಂತೆ ಮಾಹಿತಿಯನ್ನು ನೀಡಬೇಕಾಗಿ ಬಂಟರ ಸಂಘದಿಂದ ತಿಳಿಸಲಾಗಿದೆ.

ಸಮೀಕ್ಷೆ ನಡೆಸುವವರ ಮೊಬೈಲ್ ಆಪ್‌ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಬೇಕು. 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A -0227)ರಂತೆ ಬಂಟ (Bunt) ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿರುವ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ (Nadava) ಎಂದು ನಮೂದಿಸಬೇಕು.

ಬಂಟರಲ್ಲಿ ಶೆಟ್ಟಿ, ಆಳ್ವ, ಸಾಮಾನಿ, ಭಂಡಾರಿ, ಅಡಪ, ಅಡ್ಯಂತಾಯ, ಪೂಂಜ, ಚೌಟಿ ಮುಂತಾದ ಕುಲನಾಮಗಳು (Surname) ಇದ್ದು ಇವುಗಳು ಜಾತಿ ಸೂಚಕ ಪದಗಳು ಆಗಿರುವುದಿಲ್ಲ. ಆದುದರಿಂದ ಎಲ್ಲಿಯೂ ತಮ್ಮ ಕುಲನಾಮಗಳನ್ನು ಪ್ರಸ್ತಾಪಿಸದೇ ಜಾತಿ ಕಾಲಂನಲ್ಲಿ ಬಂಟ ಎಂಬುದಾಗಿಯೂ ಸಮಾನಾರ್ಥದ (ಪರ್ಯಾಯ) ಹೆಸರು ಎಂಬಲ್ಲಿ ನಾಡವ ಎಂಬುದಾಗಿಯೂ ನಮೂದಿಸತಕ್ಕದ್ದು.

ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಈ ಜಾತಿ ಸಮೀಕ್ಷೆ ಅತ್ಯಂತ ಪ್ರಾಮುಖ್ಯವಾಗಿದ್ದು ಪ್ರತಿಯೊಬ್ಬರೂ ಮೇಲೆ ತಿಳಿಸಿದಂತೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡ ತಿಳಿಸಿದ್ದದಾರೆ.

Related posts

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!