25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya
error: Content is protected !!