September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!